ಪೂರ್ವದ್ವೇಷ: ಯುವಕನ ಕೊಲೆ

Advertisement

ಬೆಳಗಾವಿ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ಕೊಚ್ವಿ ಕೊಲೆ ಮಾಡಿದ ಘಟನೆ ಗುರುವಾರ ತಡರಾತ್ರಿ ಮಾರಿಹಾಳದಲ್ಲಿ ನಡೆದಿದೆ.
ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ವರು ಹತ್ಯೆ ನಡೆಸಿದ ಘಟನೆ ವರದಿಯಾಗಿದೆ.
ಈ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಪೂರ್ವ ದ್ವೇಷದಿಂದ ಕೊಲೆ ನಡೆದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.