ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 8 ಶಾಸಕ ಹಾಗೂ 4 ಬಾರಿ ಸಚಿವರಾಗಿದ್ದ ಉಮೇಶ್ ಕತ್ತಿ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಉಮೇಶ್ ಕತ್ತಿಯೊಬ್ಬರು ಅನುಭವಿ ನಾಯಕರಾಗಿದ್ದರು. ಕರ್ನಾಟಕದ ಅಭಿವೃದ್ಧಿ ಸಾಕಷ್ಟು ಕೊಡುಗೆ ಕೊಟ್ಟವರು. ಅವರ ನಿಧನ ನನಗೆ ನೋವುಂಟು ಮಾಡಿದೆ. ಅವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.