ರಾಜಧಾನಿ ಸೇರಿ ವಿವಿಧಡೆ ನಾಳೆಯಿಂದ ಮಳೆ ಸಾಧ್ಯತೆ

Advertisement

ಬೆಂಗಳೂರು: ನಾಳೆಯಿಂದ ಐದು ಕಾಲ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಪ್ರದೇಶದಲ್ಲಿ ವಾಯು ಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿ ರಾಜ್ಯದ ವಿವಿಧಡೆ ಮಳೆಯಾಗುವ ಸಂಭವವಿದೆ ಎಂದು ವರದಿಯಾಗಿದೆ. ಆದರೆ, ರಾಜಧಾನಿಯಲ್ಲಿ ನಾಳೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಗುವುದೇ ಎಂಬ ಆತಂಕ ಎದುರಾಗಿದೆ.