ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ ನಿಧನ

Advertisement

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥ ಖ್ಯಾತ ನೇತ್ರ ತಜ್ಞ ಡಾ. ಕೆ ಭುಜಂಗಶೆಟ್ಟಿ(69) ನಿಧನರಾದರು.
ಶುಕ್ರವಾರ ಸಂಜೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರು ಆಸ್ಪತ್ರೆಯಿಂದ ಮನೆಗೆ ವಾಪಸಾದ ಬಳಿಕ ಹೃದಯಾಘಾತವಾಗಿದ್ದು, ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.