ನೂತನ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ : ಯುವಕನ ಕೊಲೆ

Advertisement

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ತರೀಕೆರೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಮೃತಪಟ್ಟ ಯುವಕನ್ನು ವರುಣ್(28) ಎಂದು ಗುರುತಿಸಲಾಗಿದ್ದು,
ನೂತನ ಶಾಸಕ ಶ್ರೀನಿವಾಸ್ ಅಭಿನಂದನಾ ಸಮಾರಂಭದಲ್ಲಿ ಈ ಹತ್ಯೆ ಮಾಡಲಾಗಿದೆ. ಗಲಾಟೆ ವೇಳೆಯಲ್ಲಿ ಮಂಜು ಹಾಗೂ ಸಂಜು ಎಂಬುವರಿಗೆ ಗಾಯಗಳಾಗಿವೆ.
ಅಭಿಮಾನಿಗಳು ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಸ್ಥಳಕ್ಕೆ ಎಸ್.ಪಿ. ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.