ಬೆಂಗಳೂರ: 200 ಯೂನಿಟ್ ಉಚಿತ ವಿದ್ಯುತ್ ವಿಚಾರದಲ್ಲಿ ಬಾಡಿಗೆದಾರರ ನಡುವೆ ಉಂಟಾಗಿದ್ದ ಗೊಂದಲಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್ ತೆರೆಎಳೆದಿದ್ದಾರೆ. ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗಲಿದೆ ಎಂದು ತಿಳಿಸಿದ್ದಾರೆ. ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ವಂತ ಮನೆ ಇರಲಿ, ಬಾಡಿಗೆ ಮನೆಯಲ್ಲಿ ಇರಲಿ, ಬಾಡಿಗೆ ಕರಾರು ಪತ್ರ ಬೇಕು. ಸೇವಾಸಿಂಧು ಪೋರ್ಟಲ್ನಲ್ಲಿ ಗೃಹ ಜ್ಯೋತಿ ಅಂತ ಪ್ರತ್ಯಕ್ಷವಾಗಿ ಅರ್ಜಿ ಹಾಕಲು ಅವಕಾಶ ಇದೆ. ನಮ್ಮದು ಒಂದು ಪ್ರತ್ಯೇಕ ಆ್ಯಪ್ ಬಿಡುಗಡೆ ಮಾಡ್ತಿವಿ. ಜುಲೈ ತಿಂಗಳಿನ ಬಿಲ್ ಆಗಸ್ಟ್ ನಲ್ಲಿ ಪಾವತಿ ಮಾಡುವುದು ಬೇಡ. ನಮ್ಮ ಬಳಿ ಎರಡು ಕೋಟಿ 16 ಲಕ್ಷ ಗ್ರಾಹಕರಿದ್ದಾರೆ. ಅದರಲ್ಲಿ 2 ಕೋಟಿ 14 ಲಕ್ಷ ಗ್ರಾಹಕರಿಗೆ ಈ ಯೋಜನೆ ಲಾಭ ಸಿಗುತ್ತದೆ ಎಂದರು. ಜೂನ್ 15 ರಿಂದ ನೊಂದಣಿ ಕಾರ್ಯ ಆರಂಭವಾಗಲಿದೆ ಎಂದಿದ್ದಾರೆ.