ವಿಜಯಪುರ-ಮಂಗಳೂರು ರೈಲುಗಳು ಭಾಗಶಃ ರದ್ದು

Advertisement

ಹುಬ್ಬಳ್ಳಿ: ಮೈಸೂರು ವಿಭಾಗದ `ಶ್ರೀವಾಗಿಲು ಮತ್ತು ಯಡಕುಮರಿ’ ನಿಲ್ದಾಣಗಳ ನಡುವಿನ ಹಳಿಗಳ ನಿರ್ವಹಣೆ (ಮಷಿನ್ ಟ್ಯಾಪಿಂಗ್) ಸಲುವಾಗಿ ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ದೈನಂದಿನ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ೧೭ ದಿನಗಳ ಕಾಲ ಭಾಗಶಃ ರದ್ದುಗೊಳಿಸಲಾಗುತ್ತಿದೆ.
ಜೂನ್ ೮ ರಿಂದ ೨೪ ರವರೆಗೆ ವಿಜಯಪುರ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ ೦೭೩೭೭ ವಿಜಯಪುರ-ಮಂಗಳೂರು ಜಂಕ್ಷನ್ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಹಾಸನ ಮತ್ತು ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಹಾಸನದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
ಜೂನ್ ೯ ರಿಂದ ಜೂನ್ ೨೫ ರವರೆಗೆ ಮಂಗಳೂರು ಜಂಕ್ಷನ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ ೦೭೩೭೮ ಮಂಗಳೂರು ಜಂಕ್ಷನ್-ವಿಜಯಪುರ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಮಂಗಳೂರು ಜಂಕ್ಷನ್ ಮತ್ತು ಹಾಸನ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ತನ್ನ ನಿಗದಿತ ಸಮಯದಲ್ಲಿ ಹಾಸನದಿಂದ ಪ್ರಾರಂಭವಾಗಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.