ಮಹಾ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

Advertisement

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಅನಿರೀಕ್ಷಿತ ಬದಲಾವಣೆಯಾಗಿದೆ. ಎನ್‌ಸಿಪಿ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಸ್ಥಾನ ನಿರಾಕರಣ ಬಳಿಕ ಬಂಡಾಯವೆದ್ದ ಎನ್​ಸಿಪಿ ನಾಯಕ ಶರದ್​ ಪವಾರ್ ಅವರ ಸೋದರ ಅಳಿಯ ಅಜಿತ್ ಪವಾರ್​ ಹಲವು ಶಾಸಕರ ಬೆಂಬಲದೊಂದಿಗೆ ಭಾನುವಾರ ಮಹಾರಾಷ್ಟ್ರ ಸರ್ಕಾರವನ್ನು ಸೇರಿದ್ದಾರೆ. ಇದರ ಬೆನ್ನಲ್ಲೆ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಯಾಣ ವಚನ ಸ್ವೀಕರಿಸಿದರು.
ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಜೊತೆ ಸಭೆ ನಡೆಸಿದರು. ಅದರ ಬೆನ್ನಲ್ಲೆ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಪಡ್ನವೀಸ್​ ಅವರೊಂದಿಗೆ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಮೇಶ್ ಪೈಸ್ ಪ್ರತಿಜ್ಞಾ ವಿಧಿ ಬೋಧಿಸಿದರು.