ಎಲ್ಲದಕ್ಕೂ ಕಂಡಿಷನ್ ಅಪ್ಲೈ

Advertisement

ಬೆಂಗಳೂರು: ಬೆಲೆಯೇರಿಕೆ ಬರೆಯನ್ನು ಎಳೆದಿರುವ ಸರ್ಕಾರ ಎಂದು ಕರ್ನಾಟಕ ಬಿಜೆಪಿ ಕಾಂಗ್ರೆಸ್‌ ಸರಕಾರಕ್ಕೆ ಟ್ವೀಟ್‌ ಮೂಲಕ ಚಾಟಿ ಬಿಸಿದೆ ಇಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ವಿಶೇಷ ಸಭೆಯ ನಂತರ ಸರಣಿ ಟ್ವೀಟ್‌ ಮಾಡಿರುವ ಅವರು ಬರದಿಂದ ಬಸವಳಿಯುತ್ತಿರುವ ರಾಜ್ಯದ ಜನತೆಗೆ, ಬೆಲೆಯೇರಿಕೆ ಬರೆಯನ್ನು ಎಳೆದಿರುವ ಈ ಸರ್ಕಾರ ತಾನು ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸಿಲ್ಲ. ಅಧಿಕಾರ ಹಿಡಿದ ಮೇಲೆ ಎಲ್ಲದಕ್ಕೂ ಕಂಡಿಷನ್ ಅಪ್ಲೈ ಎಂದು ಹೇಳುತ್ತಾ, ವರ್ಗಾವಣೆ ದಂಧೆಯಲ್ಲಿ ನಿರಂತರವಾಗಿ ಸಿದ್ದರಾಮಯ್ಯರವರ ಸರ್ಕಾರ ತೊಡಗಿದೆ. ಕೇವಲ ಬಾಯಿಮಾತಿಗೆ ಸರ್ವಜನಾಂಗದ ಶಾಂತಿಯ ತೋಟ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರ ಆಡಳಿತದಲ್ಲಿ ಟಿಪ್ಪು ಛಾಯೆ ಎದ್ದು ಕಾಣುತ್ತದೆ.
ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಮೂಲಕ ತಾವು ಹಿಂದೂ ವಿರೋಧಿ ಸರ್ಕಾರ ಎಂಬುದನ್ನು ಸಿದ್ದರಾಮಯ್ಯರ ಈ ತುಘಲಕ್ ಸರ್ಕಾರ ಸಾಬೀತುಪಡಿಸುತ್ತಿದೆ. ಎಲ್ಲಾ ದಿನನಿತ್ಯ ವಸ್ತುಗಳ ಬೆಲೆಯೇರಿಕೆ, ವಿದ್ಯುತ್ ದರ ಏರಿಕೆಯಿಂದ ಜನಜೀವನ ದುರ್ಬರವಾಗಿದೆ. ಆದರೆ, ಇವುಗಳ ಬಗ್ಗೆ ಕಿಂಚಿತ್ತೂ ಗಮನಹರಿಸದೇ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುವವರ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಮೂಲಕ ಸಂವಿಧಾನ ವಿರೋಧಿಯಾಗಿದೆ. ಆಡಳಿತವನ್ನು ದುರುಪಯೋಗಪಡಿಸಿಕೊಂಡು ದಬ್ಬಾಳಿಕೆಯ ಕ್ರೌರ್ಯವನ್ನು ಮೆರೆಯುತ್ತಿದೆ. ಭಾರತದ ಭವಿಷ್ಯದ ಪ್ರಜೆಗಳಿಗೆ ರಾಷ್ಟ್ರೀಯತೆಯ ಚಿಂತನೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ, ಬಿಜೆಪಿ ಸರ್ಕಾರ ತಂದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಪರಿಷ್ಕರಿಸಿದೆ. ಹಾಗೂ ತಮ್ಮ ಬಾಲಬಡುಕತಿಗಳ ಪಠ್ಯವನ್ನು ತುರುಕಿ, ಮಕ್ಕಳ ವಿಚಾರದಲ್ಲಿಯೂ ಸಹ ತನ್ನ ದ್ವೇಷದ ಅಂಗಡಿಯನ್ನು ಈ ನಾಚಿಕೆಗೇಡು ಸರ್ಕಾರ ಮುಂದುವರೆಸಿದೆ. ಈ ಮೊದಲು ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ ಜಗಳದಲ್ಲಿ
ಪರಮೇಶ್ವರ & ಖರ್ಗೆ ಬಣಗಳು ಲಾಭ ಪಡೆಯಲು ಹವಣಿಸಿದ್ದವು. ಆದರೇ, ಇವರಿಬ್ಬರ ಕುರ್ಚಿ ಕಾಳಗದಲ್ಲಿ ಕಾಂಗ್ರೆಸ್‌ನ ಬಣಗಳು ಸೇರಿ ಸರ್ಕಾರ ಸಹ ಬಡವಾಗಿದ್ದು, ಇದರ ನೇರ ಪರಿಣಾಮ ರಾಜ್ಯದ ಜನತೆಯ ಮೇಲೆ ಬೀರುತ್ತಿದೆ. ಕಾಂಗ್ರೆಸ್‌ನ ಈ ಎಲ್ಲಾ ಜನವಿರೋಧಿ ನೀತಿಗಳ ಹಾಗೂ ಭ್ರಷ್ಟ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ಸದನದ ಹೊರಗೆ ಹಾಗೂ ಒಳಗೆ ರಾಜ್ಯದ ಜನತೆಯ ಪರ ಹೋರಾಟ ನಡೆಸಲಿದೆ ಎಂದಿದೆ.