ಬೆಂಗಳೂರು: ಸಿಎಂ ಕಚೇರಿಯಲ್ಲಿ ಲಂಚ ಕೊಡದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಕಚೇರಿಯಲ್ಲಿ ಯಾವುದೇ ಕೆಲಸ ಆಗಬೇಕಂದರೆ ಲಂಚ ಕೊಡಬೇಕು. ಶಾಸಕರು ಕೊಟ್ಟ ಪತ್ರ ತೆಗೆದುಕೊಂಡು ಹೋದರು ಕೆಲಸ ಮಾಡಲ್ಲ. ಪತ್ರದೊಂದಿಗೆ ಲಂಚ ತರಬೇಕು ಎಂದು ಅಲ್ಲಿನ ಸಿಬ್ಬಂದಿ, ಅಧಿಕಾರಿಗಳು ಡಿಮ್ಯಾಂಡ್ ಮಾಡುತ್ತಾರೆ ಎಂದು ಆರೋಪ ಮಾಡಿದ್ದಾರೆ.