ಬೆಂಗಳೂರು: ಎರಡನೇ ದಿನದ ವಿಧಾನಮಂಡಲ ಅಧಿವೇಶನದ ದಿನ ಸರ್ಕಾರದ ಗ್ಯಾರಂಟಿ ಯೋಜನೆ ಜಾರಿಗೆ ತರುವ ವಿಚಾರವಾಗಿ ಹೋರಾಟ ನಡೆಸಲು ಬಿಜೆಪಿ ಸಜ್ಜಾಗಿದೆ.
ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದ ನಳಿನ್ಕುಮಾರ್ ಕಟೀಲ್, ಬಿಎಸ್ವೈ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಮಾಜಿ ಸಿಎಂ ಬಿಎಸ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾತನಾಡಿ ಕಾಂಗ್ರೆಸ್ ಏನು ಗ್ಯಾರಂಟಿ ಕೊಟ್ಟಿದೆ, ಅದನ್ನು ಕಂಡಿಶನ್ಯಿಲ್ಲದೇ ತರಬೇಕು, ಗೋ ಹತ್ಯೆ ಕಾಯಿದೆ ಬದಲಾವಣೆ ಮಾಡಬಾರದು, ಇಂದು ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತೇವೆ. ಕುಮಾರಸ್ವಾಮಿ ಅವರ ಕಾಂಗ್ರೆಸ್ ಆರೋಪದ ವಿಚಾರವಾಗಿ ಮಾತನಾಡಿದ ಅವರು ‘ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳನ್ನು ನಾನು ಸ್ವಾಗತಿಸುತ್ತೇನೆ. ಅವರಿಗೆ ನಮ್ಮ ಪೂರ್ಣ ಬೆಂಬಲ ಇದೆ ಎಂದಿದ್ದಾರೆ, ಇಂದು ಫ್ರೀಡಂ ಪಾರ್ಕ್ನಲ್ಲಿ ಸಂಜೆ 5 ಗಂಟೆಯವರೆಗೂ ಪ್ರತಿಭಟನೆ ಮಾಡಲಿದ್ದೇವೆ ಎಂದರು