ಕುಸಿದು ಬಿದ್ದ ಯತ್ನಾಳ್​: ಆಸ್ಪತ್ರೆಗೆ ಶಿಫ್ಟ್​!

Advertisement

ಬೆಂಗಳೂರು : ವಿಧಾನಸಭಾ ಅಧಿವೇಶನದ ವೇಳೆ ಬಿಜೆಪಿ 10 ಶಾಸಕರನ್ನು ಅಮಾನತು ಮಾಡಲಾಗಿತ್ತು. ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್‌ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್‌ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಈ ವೇಳೆ ತಕ್ಷಣ ವಿಧಾನಸೌಧದ ಆರೋಗ್ಯ ಸಿಬ್ಬಂದಿ ಕೂಡಲೇ ಉಪಚರಿಸಿದರು. ಬಳಿಕ ಯತ್ನಾಳ್‌ ಅವರನ್ನು ವೀಲ್‌ ಚೇರ್‌ ಮೂಲಕ ಆಂಬುಲೆನ್ಸ್‌ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.