ವಿಡಿಯೋ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ

M B Patil
Advertisement

ವಿಜಯಪುರ: ಉಡುಪಿ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜ್ ಶೌಚಗೃಹದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಚಿತ್ರೀಕರಣದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ, ರಾಜ್ಯದಲ್ಲಿ ಕಾನೂನು ಇದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ಈ ಪ್ರಕರಣದಲ್ಲಿ ನಿರಪರಾಧಿಗಳು ಟಾರ್ಗೆಟ್ ಆಗಿದ್ದರೆ ಅದು ಆಗಬಾರದು ಎಂದರು.
ರಾಜ್ಯದಲ್ಲಿ ಒಂದು ಸಮುದಾಯದ ಪರವಾಗಿ ಆಡಳಿತ ನಡೆಯುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಮಾಡಿದ ಆರೋಪಕ್ಕೆ ಗರಂ ಆದ ಸಚಿವರು. ನಾವು ಬಿಜೆಪಿ ಮಾತು ಕೇಳಿ ಆಡಳಿತ ನಡೆಸುತ್ತಿಲ್ಲ. ಬಿಜೆಪಿಯನ್ನು ಕಳೆದ ಚುನಾವಣೆಯಲ್ಲಿ ಜನ ತಿರಸ್ಕರಿಸಿದ್ದಾರೆ. ತಿರಸ್ಕರಿಸಿದ ನಾಯಕರ ಬಗ್ಗೆ ನನ್ನ ಮುಂದೆ ಹೇಳಲು ಹೋಗಬೇಡಿ ಎಂದು ಖಡಕ್ ಉತ್ತರ ನೀಡಿದರು.