ಮಾಜಿ ಸಚಿವ ರೇವಣ್ಣ ಆಪ್ತನ ಭೀಕರ ಕೊಲೆ

Advertisement

ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಆಪ್ತನನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಮಾಡಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಗ್ರ್ಯಾನೈಟ್ ಉದ್ಯಮಿ ಕೃಷ್ಣೇಗೌಡ(53) ಎಂಬಾತನೇ ಕೊಲೆಯಾದ ಉದ್ಯಮಿ. ಹಾಸನದ ಹೊರವಲಯದಲ್ಲಿರುವ ತಮ್ಮ ಗ್ರ್ಯಾನೈಟ್ ಫ್ಯಾಕ್ಟರಿಯ ಎದುರಲ್ಲೇ ಉದ್ಯಮಿ ಕೃಷ್ಣೇಗೌಡ ಅವನ್ನು ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.