ಶಿವಮೊಗ್ಗ: ಇಂದಿನಿಂದ ಬೆಂಗಳೂರು-ಶಿವಮೊಗ್ಗ ವಿಮಾನಯಾನ ಕುರಿತು ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು “ಶಿವಮೊಗ್ಗದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣಕ್ಕೆ ಮಲೆನಾಡ ಭಾಗದಲ್ಲಿ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕ ಅಭಿವೃದ್ದಿಗೆ ನಾಂದಿ ಹಾಡಲಿದೆ. ಮುಂಬರುವ ದಿನಗಳಲ್ಲಿ ತಿರುಪತಿ, ಗೋವಾ, ಚೆನ್ನೈ ಸೇರಿದಂತೆ ಅನೇಕ ಭಾಗಗಳಿಗೆ ವಿಮಾನ ಹಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು.” ಎಂದಿದ್ದಾರೆ.