ವಿಮಾನ ಪ್ರಯಾಣಕ್ಕೆ 500 ರೂ. ರಿಯಾಯತಿ

Advertisement

ಶಿವಮೊಗ್ಗ: ಇಂದಿನಿಂದ ಬೆಂಗಳೂರು-ಶಿವಮೊಗ್ಗ ವಿಮಾನಯಾನ ಆರಂಭದ ಹಿನ್ನಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಭರ್ಜರಿ ರಿಯಾಯತಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಪ್ರಯಾಣಕ್ಕೆ ಉತ್ತೇಜನ ನೀಡುವ ಸಲುವಾಗಿ ರಿಯಾಯತಿ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನ ಹಂಂಚಿಕೊಂಡಿರುವ ಅವರು ತಮ್ಮ ಸಂದೇಶದಲ್ಲಿ “ರಿಯಾಯಿತಿ ದರದಲ್ಲಿ ಸಂಚರಿಸಲು ಅವಕಾಶ! ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನದ ಮೂಲಕ ಪ್ರಯಾಣಿಸುವ ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರದ ವತಿಯಿಂದ ₹500 ರಿಯಾಯಿತಿ ದೊರೆಯಲಿದೆ ಎಂದಿದ್ದಾರೆ. ಮುಂದಿನ ಒಂದು ವರ್ಷದವರೆಗೆ ಈ ರಿಯಾಯತಿ ಇರಲಿದೆ.