ದಸರಾ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ

Advertisement

ಮೈಸೂರು: ಮೈಸೂರು ದಸರಾ ಗಜಪಯಣಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆತಿದೆ. ಐತಿಹಾಸಿಕ ದಸರಾ ಪ್ರಾರಂಭವಾಗಿದ್ದು ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಣೆ ಮಾಡಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಈ ಬಾರಿ ಗಜಪಯಣದ ಮೂಲಕ ಆರಂಭಿಕ ಮುನ್ನುಡಿ ಬರೆಯಲಾಗುತ್ತಿದೆ. ನಾಗರಹೊಳೆಯ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅಭಿಮನ್ಯು ನೇತೃತ್ವದ 9 ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಾಡಹಬ್ಬ ದಸರಾ-2023ರ ಆನೆಗಳ ಪಟ್ಟಿ ಮತ್ತು ಕಿರು ಪುಸ್ತಕ ಬಿಡುಗಡೆ ಮಾಡಲಾಯಿತು.