ಬೆಂಗಳೂರು: ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಜೆಡಿಎಸ್ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ನೀಡಿದ್ದ ಅಫಿಡವಿಟ್ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿ ಜಿ. ದೇವರಾಜೇಗೌಡ 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಎ ಮಂಜು ಮತ್ತು ದೇವರಾಜೇಗೌಡ ಅವರು ಪ್ರಜ್ವಲ್ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.