ರಾಜ್ಯದಲ್ಲಿ ಜೆಡಿಎಸ್ ನಂಬರ್ 1: ಇಬ್ರಾಹಿಂ

ಸಿಎಂ ಇಬ್ರಾಹಿಂ
Advertisement

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪೂರ್ಣ ಪ್ರಮಾಣದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭವಿಷ್ಯ ನುಡಿದರು.
ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಕಣಕ್ಕಿಳಿಯುತ್ತಾರೆ. ಪ್ರತಿ ಕ್ಷೇತ್ರದಲ್ಲೂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಕೆಲವರನ್ನು ಸಮಾಧಾನ ಪಡಿಸುವ ಕಾರ್ಯ ನಡೆಯುತ್ತಿದೆ ಎಂದರು. ಇನ್ನು ರಾಜ್ಯದಲ್ಲಿ ಜೆಡಿಎಸ್ ನಂಬರ್ 1 ಸ್ಥಾನದಲ್ಲಿದೆ. ಎರಡನೇ ಸ್ಥಾನಕ್ಕೆ ಎರಡು ರಾಷ್ಟ್ರೀಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಹೀಗಾಗಿ, ಅವರುಗಳಿಗೆ ತಳಮಳ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.