ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ವಾಟ್ಸಪ್ ಚಾನೆಲ್ ಮೂಲಕ ಲಭ್ಯವಾಗಿದ್ದಾರೆ, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ನಿಮ್ಮ ಮೊಬೈಲ್ನ ಒಂದೇ ಕ್ಲಿಕ್ ನಲ್ಲಿ ನಮ್ಮ ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯನ್ನು ತಲುಪಿಸುವ ಉದ್ದೇಶದೊಂದಿಗೆ ವಾಟ್ಸ್ಆ್ಯಪ್ ಚಾನಲ್ ಅನ್ನು ಆರಂಭಿಸಿದ್ದೇನೆ. ಈ ಕೆಳಗಿನ ಲಿಂಕ್ ಬಳಸಿ Chief Minister of Karnataka ಚಾನಲನ್ನು ಫಾಲೋ ಮಾಡುವ ಮೂಲಕ ನಮ್ಮೊಂದಿಗೆ ನಿರಂತರ ಸಂಪರ್ಕ ಸಾಧಿಸಬಹುದಾಗಿದೆ ಎಂದಿದ್ದಾರೆ.