ಮಂಗಳೂರು: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಲ ಚಿತ್ರಗಳನ್ನು ಹಂಚಿಕೊಂಡು ಪೋಸ್ಟ್ ಮಾಡಿರುವ ಅವರು ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಗೆ ಇಂದು ಭೇಟಿ ನೀಡಿದೆ, ಪಾರ್ಕ್ ನಲ್ಲಿ 33 ಅಡಿ ಎತ್ತರದ ಹಾಗೂ ಒಂದೂವರೆ ಟನ್ ಭಾರವುಳ್ಳ ಪರಶುರಾಮ ಮೂರ್ತಿಯನ್ನು ಸ್ಥಾಪಿಸಿದ್ದು, ಮೂರ್ತಿಯ ಗುಣಮಟ್ಟದ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದೆ. ಇದೇ ಸಮಯದಲ್ಲಿ ಪ್ರವಾಸೋದ್ಯಮ ಕ್ಷೇತ್ರವಾಗಿಸುವ ದೃಷ್ಟಿಯಿಂದ ಪಾರ್ಕ್ ಅಭಿವೃದ್ಧಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ ಎಂದಿದ್ದಾರೆ.