ಬೆಂಗಳೂರು: ಮಹದೇವಪ್ಪ ನಿನಗೂ ಫ್ರೀ ಕಾಕಾಪಾಟೀಲ್ ನಿನಗೂ ಫ್ರೀ ಅಂತಾ ಹೇಳಿದ್ದ ಕಾಂಗ್ರೆಸ್ ಈಗ ತಮಿಳುನಾಡು ಸಿಎಂ ಸ್ಟಾಲಿನ್ಗೂ ನೀರು ಫ್ರೀ ಎಂದಿದೆ ಎಂದು ಬಿಜೆಪಿ ಮಾಜಿ ಶಾಸಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.
ಕಾವೇರಿ ನೀರಿನ ವಿಚಾರವಾಗಿ ಮಾತನಾಡಿರುವ ಅವರು, ತಮಿಳುನಾಡು ತಮ್ಮ ಬೆಳೆಗೆ ನೀರು ಕೇಳುತ್ತಿದೆ. ಆದರೆ ನಮಗೆ ಕುಡಿಯಲು ನೀರಿಲ್ಲ. ಕುರುಬೂರು ಶಾಂತಕುಮಾರ್ ನೇತೃತ್ವದ ಸೆ. 26ರ ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲ ನೀಡಲಿದೆ. ಬಂದ್ ಬೆಂಬಲಿಸುವಂತೆ ಕಾರ್ಯಕರ್ತರಿಗೂ ಸೂಚನೆ ನೀಡಲಾಗಿದೆ ಎಂದರು ಅವರು ಹೇಳಿದ್ದಾರೆ.