ಕಮಲ ಬಿಟ್ಟು ಕೈ ಹಿಡಿದ ಪೂರ್ಣಿಮಾ

Advertisement

ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೂರ್ಣಿಮಾ ಈಗಲೂ ಕೃಷ್ಣಪ್ಪ ಕುಟುಂಬಕ್ಕೆ ಗೌರವ ಕೊಡುತ್ತಾರೆ. ನನ್ನನ್ನ ಯಾವಾಗಲು ಜನ ಕಾಂಗ್ರೆಸ್ ಕೃಷ್ಣಪ್ಪನವರ ಮಗಳು ಎಂದು ಗುರುತಿಸುತ್ತಿದ್ದರು. ಕಾರಣಾಂತರಗಳಿಂದ ಕಹಿ ಘಟನೆಯಿಂದ ನಮ್ಮ ತಂದೆ ಕೃಷ್ಣಪ್ಪನವರು ಪಕ್ಷ ಬಿಟ್ಟಿದ್ದರು. ಎಲ್ಲರ ಅಪೇಕ್ಷೆಯಂತೆ ಈ ದಿನ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದೇನೆ, ಕಾಂಗ್ರೆಸ್‍ನ ರಕ್ತ ನಿನ್ನಲ್ಲಿ ಇದೆ ಎಂದು ಅನೇಕರು ನನಗೆ ಹೇಳುತ್ತಿದ್ದರು. ಈಗ ಕಾಂಗ್ರೆಸ್‍ನಲ್ಲಿ ನಮ್ಮ ಪ್ರಯಾಣ ಶುರುವಾಗಲಿದೆ ಎಂದರು.