ಮುರುಘಾ ಶ್ರೀ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ

Advertisement

ಬೆಂಗಳೂರು: ಮುರುಘಾ ಶರಣರ ವಿರುದ್ಧದ ಜಾಮೀನು ರಹಿತ ಬಂಧನದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದೆ.
ಎರಡನೇ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶರಣರಿಗೆ ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್‌ರವರಿದ್ದ ಪೀಠ ಆದೇಶ ಹೊರಡಿಸಿದೆ. ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆ ಆಗಿದೆ. ದಾವಣಗೆರೆಯ ವಿರಕ್ತಮಠದಲ್ಲಿದ್ದ ಮುರುಘಾ ಶರಣರನ್ನು ವಶಕ್ಕೆ ಪಡೆದು ಚಿತ್ರದುರ್ಗಕ್ಕೆ ತೆರಳಿದ್ದರು. ಮುರುಘಾಶ್ರೀ ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.