ರಕ್ಷಣಾ ತಂಡಕ್ಕೆ ಸಚಿವ ಜೋಶಿ ಅಭಿನಂದನೆ

ಜೋಶಿ
Advertisement

ನವದೆಹಲಿ: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಕೊನೆಗೂ ಯಶಸ್ವಿಯಾಗಿ ಹೊರಗೆ ಕರೆತರಲಾಗಿದ್ದು, ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಎದುರಾದ ಹಲವು ಅಡೆತಡೆಗಳು, ಸವಾಲುಗಳನ್ನು ಎದುರಿಸಿ ಇವರನ್ನು ರಕ್ಷಿಸಲಾಗಿದೆ. ಇವರನ್ನು ರಕ್ಷಿಸುವಲ್ಲಿ ಕಲ್ಪಿಸಲಾದ ಕ್ಲಿಷ್ಟಕರ ಮೂಲಸೌಕರ್ಯ ಹಾಗೂ ವೈಯಕ್ತಿಕ ಅಪಾಯವನ್ನೂ ಮೀರಿ ಕಾರ್ಮಿಕರನ್ನು ಹೊರತರುವಲ್ಲಿ ನಡೆಸಿದ ಸಾಹಸಕ್ಕೆ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸದ ಅವರು, ಕಾರ್ಮಿಕರ ಸ್ಟೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.