ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿಲ್ಲ

Advertisement

ಧಾರವಾಡ: ರಾಜಸ್ಥಾನ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಅವರು ಮಾಧ್ಯಮದವರೊಂದಿಗೆ ಮಾತನಾಡಿ, ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬುದು ಸುಳ್ಳು ಸುದ್ದಿ. ವಸುಂಧರಾರಾಜೇ ಸೇರಿದಂತೆ ರಾಜ್ಯ ಘಟಕದ ಪಕ್ಷದ ಎಲ್ಲ ಮುಖಂಡರು ನನ್ನೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಮುಖಂಡರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದು, ಪಕ್ಷದ ತೀರ್ಮಾನಕ್ಕೆ ಎಲ್ಲ ಮುಖಂಡರು ಬದ್ಧರಾಗಿರಲಿದ್ದಾರೆ ಎಂದರು.