92 ಸಂಸದರ ಅಮಾನತು ಖಂಡಿಸಿ ಪ್ರತಿಪಕ್ಷಗಳ ಪ್ರತಿಭಟನೆ

Advertisement

ನವದೆಹಲಿ: ಚಳಿಗಾಲದ ಅಧಿವೇಶನದ ಉಳಿದ 92 ಸಂಸದರನ್ನು ಅಮಾನತುಗೊಳಿಸಿದ ನಂತರ ಎನ್‌ಸಿಪಿಯ ಶರದ್ ಪವಾರ್ ಮತ್ತು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರತಿಪಕ್ಷಗಳು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಲೋಕಸಭೆಯ 33 ಮತ್ತು ರಾಜ್ಯಸಭೆಯ 45 ಸದಸ್ಯರು ಸೇರಿದಂತೆ ಒಟ್ಟು 78 ಸದಸ್ಯರನ್ನು ಸೋಮವಾರ ಅಮಾನತು ಮಾಡಲಾಗಿತ್ತು. ಇದಕ್ಕೂ ಮುನ್ನಾ 13 ಸದಸ್ಯರನ್ನು ಅಮಾನತು ಮಾಡಲಾಗಿತ್ತು ಇದನ್ನು ಖಂಡಿಸಿ ಪ್ರತಿಪಕ್ಷಗಳು ಸಂಸತ್ತಿನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.