ಶಾಸಕ ಸುನಿಲ್​ ಕುಮಾರ್ ಏಕಾಂಗಿ ಪ್ರತಿಭಟನೆ

Advertisement

ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರ ಹಿಡಿದು ಶಾಸಕ ಸುನಿಲ್​ ಕುಮಾರ್ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು,
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಸಹಿತ ಪೋಸ್ಟ್‌ ಮಾಡಿರುವ ಅವರು ಅಯೋಧ್ಯೆ ಕರ ಸೇವಕನ ಬಂಧಿಸಿದ ಹಿಂದು ವಿರೋಧಿ, ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಹೋರಾಟ ಪ್ರಾರಂಭಿಸಿದ್ದೇನೆ. ಹಿಂದು ವಿರೋಧಿ ಸರ್ಕಾರ ನನ್ನನ್ನು ಬಂಧಿಸಿ ಹೋರಾಟ ಹತ್ತಿಕ್ಕುವ ಹತಾಶ ಪ್ರಯತ್ನ ಮುಂದುವರಿಸಿದೆ ಎಂದಿದ್ದಾರೆ.