ಹಿಂದೂತ್ವ ಒಬ್ಬರ ಆಸ್ತಿ ಅಲ್ಲ

Advertisement

ಹುಬ್ಬಳ್ಳಿ: ಶ್ರೀಕಾಂತ್‌ ಪೂಜಾರಿ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಮಗೆ ಶ್ರೀಕಾಂತ್‌ ಪೂಜಾರಿ ಯಾರ ಅನ್ನೋದೇ ಗೊತ್ತಿಲ್ಲ. ಆತನಿಗಾಗಿ ಸುಮ್ಮನೆ ರಾಜ್ಯಾದ್ಯಂತ ಹೋರಾಟ ಮಾಡುತ್ತಿದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರದಿಂದ ಬರೋ GST ಹಣಕ್ಕಾಗಿ ಹೋರಾಟ ಮಾಡಬೇಕು. ಒಂದು ರೂಪಾಯಿ ಹಣ ಬಂದಿಲ್ಲ. ಮೋದಿ ಸರ್ಕಾರದಿಂದ ನಮಗೆ ಅನ್ಯಾಯ ಆಗಿದೆ ಎಂದರು.
ಶ್ರೀಕಾಂತ್ ಪೂಜಾರಿ ರೌಡಿ ಶೀಟರ್, ಆತನ ಮೇಲಿರೋ ರೌಡಿ ಶೀಟರ್ ಪಟ್ಟಕ್ಕೆ ಮುಕ್ತಿ ಕೊಟ್ಟಿರೋದು ಕಾಂಗ್ರೆಸ್. ಆದರೆ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು. ರಾಮಮಂದಿರ ಉದ್ಘಾಟನೆ ಆಗುತ್ತಿರುವುದು ಸಂತೋಷದ ಸಂಗತಿ. ಪ್ರತಿ ಗ್ರಾಮದಲ್ಲಿ ರಾಮ ಮಂದಿರ ಇವೆ. ಹಿಂದೂತ್ವ ಒಬ್ಬರ ಆಸ್ತಿ ಅಲ್ಲ. ಹಿಂದೂತ್ವಕ್ಕೆ ಅನೇಕ ಇತಿಹಾಸ ಇದೆ. ಹಿಂದೂತ್ವ ಯಾವ ಪಕ್ಷದ ಆಸ್ತಿಯೂ ಅಲ್ಲ ಎಂದು ಬಿಜೆಪಿ ವಿರುದ್ಧ ಗುಡುಗಿದರು.