ಜಗತ್ತಿಗೆ ಒಳ್ಳೆಯ ದಿನಗಳಿಲ್ಲ: ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ

Advertisement

ಗದಗ: ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ
2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ, ಅಕಾಲಿಕ ಮಳೆ. ಬಾಂಬ್ ಸಿಡಿಯುವ ಸಂಭವ. ಯುದ್ಧ ಭೀತಿ. ಜನರು ತಲ್ಲಣವಾಗುತ್ತಾರೆ. ಭೂಕಂಪನ. ಜಲ ಕಂಟಕ ಎದುರಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ, ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆ ಎಂದು ಸ್ವಾಮಿಜಿ ನುಡಿದಿದ್ದಾರೆ. ಅಸ್ಥಿರತೆ, ಯುದ್ಧ ಭೀತಿ. ಅಣು ಬಾಂಬ್ ಸ್ಫೋಟವಾಗುವ ಅವಕಾಶವಿದೆ, ಜಗತ್ತಿಗೆ ವಿನಾಶ, ಜಗತ್ತಿಗೆ ಅಪಾಯ, ರೋಗ, ಸುನಾಮಿ ಹಾಗೂ ಮತೀಯ ಸಮಸ್ಯೆಯಿಂದ ಜನರು ದುಖಃ ಅನುಭವಿಸುತ್ತಾರೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಮತ್ತು ಇದಕ್ಕೆ ಪರಿಹಾರ ಸೂಚಿಸಿದ್ದು ಎಂದು ಕೋಡಿ ಶ್ರೀಗಳು ಭವಿಷ್ಯದ ಕುರಿತು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬರಬಹುದಾದ ಸಮಸ್ಯೆಗಳನ್ನು ಎದುರಿಸಲು ಜನರು ದೈವ ನಂಬುವುದೊಂದೆ ಪರಿಹಾರ, ದೈವ ಮೊರೆ ಹೋಗಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.