ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೈಸೂರು ಪ್ರವಾಸ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಮೈಸೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಮಾತ್ರ ಚರ್ಚೆಯಾಗಿದೆ. ಸೀಟ್ ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು. ಇನ್ನು ಕಾಂಗ್ರೆಸ್ನ ದುರುದ್ದೇಶದ ಪ್ರತಿಭಟನೆ ಬಗ್ಗೆ ಜನ ಜಾಗೃತಿ ಮೂಡಿಸುವಂತೆ ಅಮಿತ್ ಶಾ ಸಲಹೆ ನೀಡಿರುವುದಾಗಿ ತಿಳಿಸಿದರು.