ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಭಾರತ್ ಜೋಡೋ ನ್ಯಾಯ ಯಾತ್ರೆಯು ಉತ್ತರ ಪ್ರದೇಶವನ್ನು ತಲುಪುತ್ತದೆ ಎಂದು ನಾನು ಕಾತುರದಿಂದ ಕಾಯುತ್ತಿದ್ದೆ, ಆದರೆ ಅನಾರೋಗ್ಯದ ಕಾರಣ ನನ್ನನ್ನು ಇಂದು ಆಸ್ಪತ್ರೆಗೆ ಸೇರಿಸಬೇಕಾಯಿತು. ನಾನು ಚೇತರಿಸಿಕೊಳ್ಳುತ್ತಿದ್ದಂತೆ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ.” ಎಂದು ಹೇಳಿದ್ದಾರೆ.