ಅಮಿತ್ ಶಾ ಅವರ ವಿರುದ್ಧ 2018ರ ಚುನಾವಣೆಯ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬದಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಲ್ಲಿನ ಸುಲ್ತಾನ್ಪುರ ಸ್ಥಳೀಯ ನ್ಯಾಯಾಲಯದಲ್ಲಿ ಮಂಗಳವಾರ ಹಾಜರಾದರು.
ಉತ್ತರಪ್ರದೇಶದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಗೂ ಮೊದಲು ಅವರು ಕೋರ್ಟ್ಗೆ ಖುದ್ದು ಹಾಜರಾಗಲು ಸುಲ್ತಾನ್ಪುರಕ್ಕೆ ಆಗಮಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರಾದರು. ನ್ಯಾಯಾಲಯವು ವಿಚಾರಣೆ ನಡೆಸಿ ಅವರಿಗೆ ಜಾಮೀನು ನೀಡಿದೆ.
2018 ರ ಪ್ರಕರಣ: 2018 ರ ಚುನಾವಣೆಯ ಸಂದರ್ಭದಲ್ಲಿ ನಡೆದ ಸಮಾವೇಶವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು.