ʻಕೈʼ​ ಕಾರ್ಯಕರ್ತರಿಂದ ನಲಪಾಡ್​ಗೆ ತರಾಟೆ

ನಲಪಾಡ್
Advertisement

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಯಾತ್ರೆ ಇಂದು ಮಂಡ್ಯ ಜಿಲ್ಲೆಗೆ ಕಾಲಿಟ್ಟಿದ್ದು, ಮಂಡ್ಯದಲ್ಲಿ ʻಕೈʼ​ ಕಾರ್ಯಕರ್ತರು ಯೂತ್​ ಕಾಂಗ್ರೆಸ್​ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಯಾತ್ರೆಯಲ್ಲಿ ಜನರನ್ನು ನಿಯಂತ್ರಣ ಮಾಡುವ ವೇಳೆ ಪೊಲೀಸರು ಮತ್ತು ಜನರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ನಲಪಾಡ್ ಓಡಿ ಬಂದು ಕೈ ಮುಗಿದು ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ. ಆಗ ಮಂಡ್ಯ ಕಾಂಗ್ರೆಸ್‌ ಕಾರ್ಯಕರ್ತರು ಹೇ.. ಇದು ಬೆಂಗಳೂರು ಅಲ್ಲ ಎಂದು ನಲಪಾಡ್​ಗೆ ಆವಾಜ್ ಹಾಕಿದ್ದಾರೆ. ಬಳಿಕ ಮೊಹಮ್ಮದ್ ನಲಪಾಡ್ ಕೈ ಮುಗಿದು ವಾಪಸ್ ನಡೆದಿದ್ದಾರೆ.