ರಾಮೇಶ್ವರಂ ಕೆಫೆ ಸ್ಫೋಟ ಬರೀ ಟ್ರೈಲರ್, ಮತ್ತೆ ಬಾಂಬ್‌ ಸ್ಪೋಟಿಸುವ ಬೆದರಿಕೆ

Advertisement

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಬರೀ ಟ್ರೈಲರ್? ರಾಜಧಾನಿಯಲ್ಲಿ ಮತ್ತೆ ಬಾಂಬ್ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಇಮೇಲ್ ಬಂದಿದೆ.
ಮುಖ್ಯಮಂತ್ರಿ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಬೆದರಿಕೆ ಇ-ಮೇಲ್ ಬಂದಿದ್ದು 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೆ ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿಸುವುದಾಗಿ ಇಮೇಲ್​ನಲ್ಲಿ ಬೆದರಿಕೆ ಹಾಕಲಾಗಿದೆ.
“ನಾವು ನಿಮಗೆ ಇನ್ನೊಂದು ಟ್ರೈಲರ್ ಅನ್ನು ತೋರಿಸಲು ಬಯಸುತ್ತೇವೆ. ನಾವು ಮುಂದೆ ಅಂಬಾರಿ ಉತ್ಸವ ಬಸ್‌ನ ಸ್ಫೋಟಿಸುತ್ತೇವೆ. ಅಂಬಾರಿ ಉತ್ಸವ ಬಸ್ ಸ್ಫೋಟದ ನಂತರ, ನಾವು ನಮ್ಮ ಬೇಡಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತುತ್ತೇವೆ. ನಿಮಗೆ ಕಳುಹಿಸಲಾದ ಮೇಲ್‌ನ ಸ್ಕ್ರೀನ್‌ಶಾಟ್‌ಗಳನ್ನು ಅಪ್‌ಲೋಡ್ ಮಾಡುತ್ತೇವೆ. ಸಾಮಾಜಿಕ ಮಾಧ್ಯಮದಲ್ಲಿ ನಾವು ಮುಂದಿನ ಸ್ಫೋಟದ ಬಗ್ಗೆ ಮಾಹಿತಿಯನ್ನು ಟ್ವೀಟ್ ಮಾಡುತ್ತೇವೆ ಎಂದು ಮೇಲ್‌ನಲ್ಲಿ ಹೇಳಲಾಗಿದೆ.
ಈ ಕುರಿತು ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಸಿದ್ದಾರೆ.