ಗೀತಾ ಗೆಲುವು ಸಾಧಿಸುವುದರಲ್ಲಿ ಸಂಶಯವಿಲ್ಲ

Advertisement

ದಾವಣಗೆರೆ: ಶಿವಮೊಗ್ಗ ಬಿಜೆಪಿ ಭದ್ರಕೋಟೆ ಎಂದು ಹೇಳುತ್ತಾರೆ. ಆದರೆ, ಈಗ ಅದೆಲ್ಲ ಇಲ್ಲ ಯಾವ ಭದ್ರಕೋಟೆಗಳು ಕೂಡ ಬದಲಾಗುತ್ತದೆ ಎಂದು ತಮ್ಮ ಪತ್ನಿ ಗೆಲುವಿನ ಬಗ್ಗೆ ನಟ ಶಿವರಾಜ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗದಲ್ಲೇ ಹುಟ್ಟಿದವರು. ಶಿವಮೊಗ್ಗ ಅವರ ತವರೂರು ಹಾಗಾಗಿ ಯಾವಾಗಲೂ ಶಿವಮೊಗ್ಗಕ್ಕೆ ಹೋಗಿ ಬರುತ್ತಿರುತ್ತಾರೆ. ಅವರ ತಂದೆ ಸಿಎಂ ಆಗಿದ್ದವರು ಅವರಿಗೆ ಅಲ್ಲಿನ ಸಮಸ್ಯೆ ಬಗ್ಗೆ ಗೊತ್ತಿದೆ. ಈ ಬಾರಿ ಅಭಿಮಾನಿ ದೇವರ ಆಶೀರ್ವಾದ ಇರಲಿ ಎಂದ ಅವರು ಪತ್ನಿ ಗೆಲುವಿಗೆ ಈಗಲೇ ಮತಯಾಚಿಸಿದರು.
ಗೀತಾ ಶಿವರಾಜ್ ಕುಮಾರ್ ವಿರುದ್ಧ ಕೆಲ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಪತ್ನಿ ರಾಜಕಾರಣಿಗಳ ಕುಟುಂಬದಿಂದ ಬಂದವರು. ನಮ್ಮ ಕುಟುಂಬ ಕೂಡ ರಾಜಕಾರಣ ಹೊರತಾಗಿಲ್ಲ. ನಮ್ಮ ತಂದೆಯವರು ಇದ್ದಾಗ ರಾಜಕಾರಣಿಗಳೇ ಮನೆಗೆ ಬರುತ್ತಿದ್ದರು ಎಂದರು.
ಗೀತಾ ಶಿವರಾಜ್ ಕುಮಾರ್ ರ ಚುನಾವಣೆ ಸಿದ್ಧತೆ ಕೂಡ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಎರಡು ಸಿಎಂ ಫ್ಯಾಮಿಲಿಗಳ ನಡುವೆ ಚುನಾವಣೆ ನಡೆಯುತ್ತಿದ್ದು, ತಮ್ಮ ಪತ್ನಿ ಗೀತಾ ರೋಚಕ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.