ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಪಾಲಿನ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು,
ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ತಿನಲ್ಲಿ ವಿರೋಧ ಮುಖ್ಯಸಚೇತಕರಾಗಿರುವ ಎನ್.ರವಿಕುಮಾರ್ ಹಾಗೂ ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ.ಮುಳೆ ಎಂಬವರನ್ನು ಬಿಜೆಪಿ ಕಣಕ್ಕಿಳಿಸಿದೆ.