ಮೆಟ್ರೊ ಹಳಿಯ ಮೇಲೆ ಬಿದ್ದ ಮರದ ಕೊಂಬೆ: ಸಂಚಾರ ವ್ಯತ್ಯಯ

Advertisement

ಬೆಂಗಳೂರು: ‘ನಮ್ಮ ಮೆಟ್ರೊ’ ನೇರಳೆ ಮಾರ್ಗದಲ್ಲಿ ಮರದ ಕೊಂಬೆ ಮುರಿದು ಬಿದ್ದಿರುವ ಪರಿಣಾಮ ಸಂಚಾರ ವ್ಯತ್ಯಯ ಆಗಲಿದೆ ಎಂದು ನಮ್ಮ ಮೆಟ್ರೊ ತಿಳಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಟ್ರಿನಿಟಿ ನಿಲ್ದಾಣ–ಎಂ.ಜಿ. ರಸ್ತೆ ನಡುವೆ ಹಳಿಗಳ ಮೆಲೆ ಭಾನುವಾರ ರಾತ್ರಿ 7.25ರ ಹೊತ್ತಿಗೆ ಮರದ ಕೊಂಬೆ ಮುರಿದು ಬಿತ್ತು. ಇದರಿಂದ ಈ ಮಾರ್ಗದಲ್ಲಿ ಸುಮಾರು 20 ನಿಮಿಷ ಮೆಟ್ರೊ ಸಂಚಾರ ಸ್ಥಗಿತಗೊಂಡಿದ್ದು, ಮರದ ಕೊಂಬೆಯನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದು. ತೆರವಾದ ಕೂಡಲೇ ಎಂ.ಜಿ. ರಸ್ತೆ– ಇಂದಿರಾನಗರ ನಡುವೆ ಮೆಟ್ರೊ ರೈಲು ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದಿದ್ದಾರೆ