ಎಲ್ಲಿ ಬೇಕಾದರೂ ಚುನಾವಣೆಗೆ ಸ್ಪರ್ಧಿಸುವವನೇ ನಿಜವಾದ ನಾಯಕ

ಸಿದ್ದರಾಮಯ್ಯ
Advertisement

ಮೈಸೂರು: 224 ಕ್ಷೇತ್ರದಲ್ಲಿ ಎಲ್ಲಿ ಬೇಕಾದರೂ ಚುನಾವಣೆಗೆ ಸ್ಪರ್ಧಿಸುವವನೇ ನಿಜವಾದ ನಾಯಕ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮನ್ನು ಟೀಕೆ ಮಾಡುವವರಿಗೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶವಿದೆ. ಜನ ಬಯಸಿದ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ. ಕೋಲಾರದವರು ಬಯಸಿದರೆ ಕೋಲಾರದಲ್ಲಿ, ವರುಣದವರು ಬಯಸಿದರೆ ವರುಣದಲ್ಲಿ ಸ್ಪರ್ಧಿಸುತ್ತೇನೆ ಎಂದರು.