ಪ್ರೀತಿಯಿಂದ ಬರಮಾಡಿಕೊಂಡ ಪ್ರಧಾನಿ ಮೋದಿ-ಮಾಜಿ ಪಿಎಂ ದೇವೇಗೌಡ

Advertisement

ಇಂದು ನಾನು ಪ್ರಧಾನಿ ಮೋದಿಯವರನ್ನು ಭೇಟಿಯಾದೆ. ಅವರು ಎಂದಿನಂತೆ ನನ್ನನ್ನು ಪ್ರೀತಿಯಿಂದ ಬರಮಾಡಿಕೊಂಡರು. ಒಕ್ಕಲಿಗರ ಕುಂಚಿಟಿಗ ಉಪಜಾತಿಯನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿದೆ. ಕಾವೇರಿ ನದಿ ನೀರು ಮತ್ತು ಹಾಸನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆಯೂ ಚರ್ಚಿಸಿದ್ದೇನೆ. ಸಮಯ ಮೀಸಲಿಟ್ಟಿದ್ದಕ್ಕೆ ಪ್ರಧಾನಿಯವರಿಗೆ ಕೃತಜ್ಞನಾಗಿದ್ದೇನೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.