ಹಾರಗಳ ಹೊಸ ದಾಖಲೆ ಬರೆದ ಜೆಡಿಎಸ್‌

ದಾಖಲೆ
Advertisement

ಹಾಸನ: ಪಂಚರತ್ನ ಯಾತ್ರೆ‌ ನೂತನ ಮೈಲುಗಲ್ಲು ಸ್ಥಾಪಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಇಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.
ಕಳೆದ ನ.18ಕ್ಕೆ ಆರಂಭವಾದ ಈ ಯಾತ್ರೆಯಲ್ಲಿ ನಾಡಿನ ರೈತಾಪಿ ಜನ, ಅಭಿಮಾನಿಗಳು ಅಕ್ಕರೆಯಿಂದ ತಾವು ಬೆಳೆದ ಕೃಷಿ ಬೆಳೆಗಳಿಂದ ತಯಾರಿಸಿ ಕುಮಾರಸ್ವಾಮಿ ಅವರಿಗೆ ಹಾಕಿದ ನೂರಾರು ಹಾರಗಳು ಹೊಸ ದಾಖಲೆಯನ್ನೇ ನಿರ್ಮಿಸಿವೆ. ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ನೀಡಿವೆ.
ಈ ಕುರಿತು ಸ್ವತಃ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ ಟ್ಟಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು ಅಭಿಮಾನಿಗಳ ಹಾಗೂ ಕಾರ್ಯಕರ್ತರ ಪ್ರೀತಿ ಅಭಿಮಾನಕ್ಕೆ ಧನ್ಯವಾದ ಅರ್ಪಿಸಿದ್ದಾರೆ.