ಗಂಗಾಮತ ಸಮುದಾಯ ಎಸ್​ಟಿಗೆ ಸೇರ್ಪಡೆ: ಸಿಎಂ ಬೊಮ್ಮಾಯಿ ಭರವಸೆ

ಚೌಡಯ್ಯ
Advertisement

ಹಾವೇರಿ: ಗಂಗಾಮತ ಸಮುದಾಯವನ್ನು ಎಸ್​ಟಿಗೆ ಸೇರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಜಿಲ್ಲೆಯ ನರಸೀಪುರದಲ್ಲಿ ನಡೆದ ಅಂಬಿಗರ ಚೌಡಯ್ಯರ ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿ, ಎಸ್​​ಟಿಗೆ ಸೇರಿಸುವ ಫೈಲ್​ ಕೇಂದ್ರದಲ್ಲಿ ಅಂತಿಮ ಹಂತಕ್ಕೆ ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮತ್ತೊಮ್ಮೆ ಮಾತನಾಡುತ್ತೇನೆ. ಆದಷ್ಟು ಬೇಗ ಗಂಗಾಮತ ಸಮುದಾಯವನ್ನು ಎಸ್​ಟಿಗೆ ಸೇರಿಸುತ್ತೇನೆ. ಗಂಗಾಮತ ಪೀಠಕ್ಕೆ 10 ಕೋಟಿ ಕೊಡುವುದಾಗಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.​ ಯಡಿಯೂರಪ್ಪ ಹೇಳಿದ್ದಾರೆ. ಅದರ ಪೈಕಿ ಈಗಾಗಲೇ 5 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಆದಷ್ಟು ಬೇಗ ಉಳಿದ 5 ಕೋಟಿ ರೂ. ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.