ನ್ಯಾಯ ಕೇಳಬೇಕಿರೋದು ಪರಮೇಶ್ವರ್-ಖರ್ಗೆ

Advertisement

ಚಿಕ್ಕಮಗಳೂರು: ನ್ಯಾಯ ಕೇಳಬೇಕಿರೋದು ಪರಮೇಶ್ವರ್-ಖರ್ಗೆಯವರು, ಸಿದ್ದರಾಮಯ್ಯ ಅಲ್ಲ. ಸಿದ್ದರಾಮಯ್ಯ ಯಾವ ರೀತಿ ನ್ಯಾಯ ಬಯಸುತ್ತಿದ್ದಾರೆ ನನಗೆ ಗೊತ್ತಾಗ್ತಿಲ್ಲ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ಮೋದಿ ನ್ಯಾಯ ಕೊಡಿ, ಎಂಬ ಸಿದ್ದರಾಮಯ್ಯ ಸರಣಿ ಟ್ವೀಟ್ ವಿಚಾರ ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ನನ್ನನ್ನ ಸೋಲಿಸಿದವರನ್ನ ಸೋಲಿಸಿ ನ್ಯಾಯ ಕೊಡಿ ಎಂದು ಪರಮೇಶ್ವರ್ ಕೇಳಬೇಕು. ಅಧಿಕಾರ ಇದ್ರೆ ಇರ್ತೀನಿ, ಇಲ್ಲ ಬೇರೆ ಪಕ್ಷಕ್ಕೆ ಹೋಗ್ತೀನಿ ಅನ್ನೋರು ಮೋದಿ ಅಲ್ಲ. ಎಸ್‌ಡಿಪಿಐ-ಪಿಎಫ್‍ಐ ಕೇಸ್ ಹಿಂಪಡೆದು ಸರಣಿ ಕೊಲೆಗೆ ಕಾರಣವಾಗಿದ್ದು ನೀವು, ಅದಕ್ಕೆ ಜನ ನ್ಯಾಯ ಕೊಟ್ಟಿದ್ದು, ರಿಡ್ಯೂ ಹೆಸರಲ್ಲಿ ಸಾವಿರಾರು ಕೋಟಿ ಹಗರಣ ಮಾಡಿದ್ದಕ್ಕೆ ಜನ ನ್ಯಾಯ ಕೊಟ್ಟಿದ್ದು, ಸಮಾಜವಾದಿ ಹೆಸರಲ್ಲಿ ಮಜಾವಾದಿ ರಾಜಕಾರಣ ಮಾಡಿದ್ದಕ್ಕೆ ಜನ ನ್ಯಾಯ ಕೊಟ್ಟಿದ್ದು. ಆದರೆ ಸಿದ್ದರಾಮಯ್ಯ ಯಾವ ರೀತಿ ನ್ಯಾಯ ಬಯಸುತ್ತಿದ್ದಾರೆ ನನಗೆ ಗೊತ್ತಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.