ಡಿಂಪಲ್ ಕ್ವೀನ್ ರಚಿತಾ ವಿರುದ್ಧ ದೂರು ದಾಖಲು

ರಚ್ಚು
Advertisement

ಮಂಡ್ಯ: ‘ಕ್ರಾಂತಿ’ ಸಿನಿಮಾದ ನಾಯಕಿ ಕನ್ನಡದ ಸ್ಟಾರ್‌ ನಟಿ ರಚಿತಾ ರಾಮ್‌ ನೀಡಿರುವ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಈ ಬಾರಿ ಗಣರಾಜ್ಯೋತ್ಸವ ಮರೆತು ‘ಕ್ರಾಂತಿ’ ಉತ್ಸವ ಮಾಡಿ ಎಂದ ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಈ ರೀತಿಯ ಹೇಳಿಕೆ ಕೊಡಬೇಡಿ ಎಂದು ಬುದ್ಧಿ ಹೇಳಿದ್ದಾರೆ. ಅಲ್ಲದೆ ನಟಿ ರಚಿತಾ ರಾಮ್ ಹೇಳಿಕೆ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ನಟಿ ರಚಿತಾ ರಾಮ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಭಾರತದ ಸಂವಿಧಾನದ ದಿನಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಟಿ ರಚಿತಾ ರಾಮ್ ವಿರುದ್ಧ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನಿಂದ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.