ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರದ ವಿವಿ 28ಕ್ಕೆ ಕೇಂದ್ರ ಗೃಹ ಸಚಿವರಿಂದ ಶಂಕುಸ್ಥಾಪನೆ

Advertisement

ಧಾರವಾಡ: ಶಿಕ್ಷಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿವಿಯ ನೂತನ ಕ್ಯಾಂಪಸ್ ನಿರ್ಮಿಸಲು ನಿರ್ಧರಿಸಿದ್ದು, ಬರುವ ಜ. ೨೮ರಂದು ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಿ ಮಾತನಾಡಿ, ಗುಜರಾತ ರಾಜ್ಯದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯದ ೮ ಕ್ಯಾಂಪಸ್‌ಗಳು ದೇಶದ ವಿವಿಧ ರಾಜ್ಯಗಳಲ್ಲಿವೆ. ೯ನೇ ಕ್ಯಾಂಪಸ್ ಧಾರವಾಡದಾಗಿದ್ದು, ಇದು ಪೂರ್ಣಗೊಂಡಲ್ಲಿ ದಕ್ಷಿಣ ಭಾರತದಲ್ಲೇ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ, ಗುಣಮಟ್ಟದ ವಿಶ್ವವಿದ್ಯಾಲಯ ಸ್ಥಾಪಿತವಾದಂತಾಗುತ್ತದೆ ಎಂದರು.