ಲಾರಿಗೆ ಕ್ರೂಸರ್‌ ಡಿಕ್ಕಿ: 9ಜನ ಸಾವು

Advertisement

ತುಮಕೂರು: ಓವರ್ಟೇಕ್ ಮಾಡಲು ಹೋಗಿ ಕ್ರೂಸರ್ ವಾಹನವೊಂದು ಲಾರಿಗೆ ಡಿಕ್ಕಿಯಾಗಿ 9ಜನ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ.
ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಕಳ್ಳಂಬೆಳ್ಳ ಸಮೀಪ ಚಿಕ್ಕನಹಳ್ಳಿ ಸಮೀಪ ಬಾಳೇನಹಳ್ಳಿ ಬಳಿ ಈ ಅವಘಡ ನಡೆದಿದೆ. ಪ್ರಯಾಣಿಕರೆಲ್ಲರೂ ಎಲ್ಲರೂ ರಾಯಚೂರು ಮತ್ತು ಮಾನ್ವಿ ಊರಿನವರು ಎಂದು ತಿಳಿದು ಬಂದಿದೆ‌. ಕ್ರೂಸರ್‌ನಲ್ಲಿ 23 ಜನ ಕೂಲಿಕಾರ್ಮಿಕರು ಕೆಲಸಕ್ಕಾಗಿ ಮಾನ್ವಿಯಿಂದ ಬೆಂಗಳೂರಿಗೆ ಹೊರಟಿದ್ದರು. ಗಾಯಾಳುಗಳನ್ನ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಕಳ್ಳಂಬೆಳ್ಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ ಸಂತ್ರಸ್ತರಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವಾನ ಹೇಳಿ, ಪರಿಹಾರ ಘೋಷಿಸಿದ್ದಾರೆ. PMNRF ನಿಂದ ಮೃತಪಟ್ಟವರಿಗೆ ತಲಾ 2ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.